Minister D Sudhakar In Critical Condition,ಶ್ವಾಸಕೋಶದ ಸೋಂಕಿನಿಂದ ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ: ಲಂಗ್ಸ್ ಟ್ರಾನ್ಸ್ ಪ್ಲಾಂಟೇಷನ್ ಸರ್ಜರಿಗೆ ವೈದ್ಯರ ಸಿದ್ದತೆ – karnataka minister d sudhakar in critical condition for lung infection


ರಾಜ್ಯದ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ.ಸುಧಾಕರ್ ಅವರ ಶ್ವಾಸಕೋಶದ ಸೋಂಕು ಉಲ್ಬಣವಾಗಿದ್ದು, ಕಿಮ್ಸ್‌ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಸದ್ಯ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್‌ ಮೂಲಕ ಚಿಕಿತ್ಸೆ ನೀಡಲಾಗುತ್ತಿದ್ದು, ಇದೀಗ ಶ್ವಾಸಕೋಶ ಕಸಿ ಮಾಡಲು ವೈದ್ಯರು ಸಿದ್ದತೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ.

ಹೈಲೈಟ್ಸ್‌:

  • ಕರ್ನಾಟಕದ ಸಚಿವ ಡಿ.ಸುಧಾಕರ್ ಅವರ ಆರೋಗ್ಯದಲ್ಲಿ ಏರುಪೇರು
  • ಶ್ವಾಸಕೋಶ ಸೋಂಕಿನಿಂದ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ, ಆರೋಗ್ಯ ಸ್ಥಿತಿ ಗಂಭೀರ
  • ಶ್ವಾಸಕೋಶ ಕಸಿ ಮಾಡಲು ವೈದ್ಯರ ಸಿದ್ದತೆ
ಸಚಿವ ಡಿ ಸುಧಾಕರ್‌
ಸಚಿವ ಡಿ ಸುಧಾಕರ್‌ (ಸಂಗ್ರಹ ಚಿತ್ರ)(ಗ್ಯಾಲರಿ– Agencies)
ಬೆಂಗಳೂರು: ಕರ್ನಾಟಕದ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ.ಸುಧಾಕರ್ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕಾಂಗ್ರೆಸ್‌ ನಾಯಕ ಸಚಿವ ಡಿ.ಸುಧಾಕರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಚಿವ ಡಿ.ಸುಧಾಕರ್‌ ಅವರಿಗೆ ಶ್ವಾಸಕೋಶ ಸೋಂಕು, ಸ್ಥಿತಿ ಗಂಭೀರ

ಇತ್ತೀಚೆಗಷ್ಟೇ ಮೊಣಕಾಲು ಸಂಬಂಧ ಆಪರೇಷನ್‌ ಒಂದರ ಸಲುವಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ಶಸ್ತ್ರಚಿಕಿತ್ಸೆಯ ಬಳಿಕ ಅವರಿಗೆ ಶ್ವಾಸಕೋಶ ಸೋಂಕು ಕಾಣಿಸಿಕೊಂಡಿದ್ದು, ಇದು ಇದ್ದಕ್ಕಿದ್ದಂತೆ ಉಲ್ಬಣವಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಮಣಿಪಾಲ್‌ ಆಸ್ಪತ್ರೆಯಿಂದ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿಲಾಗುತ್ತಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಶ್ವಾಸಕೋಶದ ಸೋಂಕು ಹೆಚ್ಚಾಗಿದ್ದು, ಇದೀಗ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಕಿಮ್ಸ್‌ ನ ತೀವ್ರ ನಿಗಾ ಘಟಕದಲ್ಲಿ (ICU) ವೆಂಟಿಲೇಟರ್ ಅಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ನುರಿತ ವೈದ್ಯರ ತಂಡವು ಅವರ ಆರೋಗ್ಯದ ಮೇಲೆ 24 ಗಂಟೆಗಳ ಕಾಲ ನಿರಂತರ ನಿಗಾ ಇರಿಸಿದೆ ಎಂದು ತಿಳಿದುಬಂದಿದೆ.

ಶ್ವಾಸಕೋಶ ಕಸಿಗೆ ವೈದ್ಯರ ಸಿದ್ದತೆ

ಇನ್ನು, ಡಿ. ಸುಧಾಕರ್‌ ಅವರ ಆರೋಗ್ಯವನ್ನು ಪರಿಶೀಲನೆ ನಡೆಸಿರುವ ವೈದ್ಯರ ತಂಡ ಇದೀಗ ಅವರಿಗೆ ಶ್ವಾಸಕೋಶ ಕಸಿ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಶ್ವಾಸಕೋಶ ಸೋಂಕಿನಿಂದಾಗಿ ಗಂಭೀರ ಸ್ಥಿತಿಯಲ್ಲಿರುವ ಡಿ.ಸುಧಾಕರ್‌ ಅವರಿಗೆ ಶ್ವಾಸಕೋಶ ಕಸಿ ಮಾಡುವ ಶಸ್ತ್ರಚಿಕಿತ್ಸೆಗೆ ವೈದ್ಯರು ಸಿದ್ದತೆ ಮಾಡಿಕೊಂಡಿದ್ದಾರೆ. ಈ ನಿಟ್ಟನಲ್ಲಿ ಡಾ.ವೆಂಕಟಗಿರಿ ನೇತೃತ್ವದಲ್ಲಿ ಲಂಗ್ಸ್ ಟ್ರಾನ್ಸ್ ಪ್ಲಾಂಟೇಷನ್ ಸರ್ಜರಿ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

CM ಮತ್ತು DCM ಭೇಟಿಯಾಗಿ ಆರೋಗ್ಯ ಸ್ಥಿತಿ ವಿಚಾರಣೆ

ಇನ್ನು, ಡಿ.ಸುಧಾಕರ್‌ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಕಾಂಗ್ರೆಸ್‌ ನಾಯಕರುಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ಆಸ್ಪತ್ರೆಗೆ ತೆರಳಿ, ಸುಧಾಕರ್ ಅವರ ಆರೋಗ್ಯದ ಸ್ಥಿತಿಗತಿಯನ್ನು ವೈದ್ಯರಿಂದ ವಿಚಾರಿಸಿದ್ದಾರೆ ಎಂದು ತಿಳಿದುಬಂದಿದೆ.

ಸಚಿವರ ಆರೋಗ್ಯ ಸ್ಥಿತಿ ವಿಷಮವಾಗಿದ್ದು, ಕಳೆದ 48 ಗಂಟೆಗಳಲ್ಲಿ ಅವರ ಅಂಗಾಂಗಗಳ ಕಾರ್ಯನಿರ್ವಹಣೆಯಲ್ಲಿ ವ್ಯತ್ಯಯ ಕಂಡುಬರುತ್ತಿದೆ ಎನ್ನಲಾಗಿದೆ.ಇನ್ನು, ಸಚಿವರ ಆರೋಗ್ಯ ಸ್ಥಿತಿಯ ಬಗ್ಗೆ ಕಿಮ್ಸ್ ಆಸ್ಪತ್ರೆಯ ತಜ್ಞ ವೈದ್ಯರ ಮಂಡಳಿ ಬುಲೆಟಿನ್ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ವರ್ಷ ಯು

ಲೇಖಕರ ಬಗ್ಗೆವರ್ಷ ಯು ಲೇಖಕರ ಪರಿಚಯ : ವರ್ಷ ಯು ಅವರು ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಕನ್ಸಲ್ಟಂಟ್ ಡಿಜಿಟಲ್ ಕಂಟೆಂಟ್ ಪ್ರೊಡ್ಯೂಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿಜಯ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದಿದ್ದಾರೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳ ಜೊತೆಗೆ ರಾಜ್ಯದ ಪ್ರಮುಖ ವಿಷಯಗಳನ್ನು ಪ್ರಕಟಿಸುವುದರಲ್ಲಿ ಆಸಕ್ತಿ ಹೊಂದಿದ್ದಾರೆ. ಜೊತೆಗೆ ಕೆ-ಕಲ್ಚರ್ ಅದರಲ್ಲೂ ಪ್ರಮುಖವಾಗಿ ಕೆ-ಎಂಟರ್ಟೈನ್ ಮೆಂಟ್‌ ಹಾಗೂ ಸೆಲೆಬ್ರಿಟಿಗಳ ಜೀವನವನ್ನು ಕುರಿತು ಮಾಹಿತಿ ನೀಡುವ ಸರಳ ವಿಸೃತ್ತ ವರದಿಗಳನ್ನು ಪ್ರಕಟಿಸುವಲ್ಲಿ ವಿಶೇಷ ಆಸಕ್ತಿಹೊಂದಿದ್ದಾರೆ. ಇಷ್ಟೇ ಅಲ್ಲದೆ, ಪ್ರವಾಸ ಸಂಬಂಧಿತ ವರದಿ ಹಾಗೂ ಮಾನವ ಆಸಕ್ತಿ ಕಥನಗಳನ್ನು ವರದಿ ಮಾಡುವುದು ಹಾಗೂ ಪ್ರಕಟಿಸುವುದು ಇವರ ನೆಚ್ಚಿನ ಕೆಲಸ.

ಪರಿಣಿತಿ : ಜಾಗತಿಕ ವಿದ್ಯಾಮಾನಗಳ ಹಾಗುಹೋಗುಗಳ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದು, ಹಲವು ಸ್ವಾರಸ್ಯಕರ ಲೇಖನಗಳನ್ನು ಪ್ರಕಟಿಸಿದ್ದಾರೆ. ಕೇವಲ ಜಾಗತಿಕ ವಿದ್ಯಮಾನಗಳು ಮಾತ್ರವಲ್ಲದೆ, ಕೆ-ಕಲ್ಚರ್ ವಿಶೇಷವಾಗಿ ಕೆ-ಎಂಟರ್ಟೈನ್‌ ಮೆಂಟ್‌ ಸುದ್ದಿಗಳನ್ನು ಕನ್ನಡಿಗರಿಗೆ ಅರ್ಥವಾಗುವ ರೀತಿಯಲ್ಲಿ ಸರಳ ಭಾಷೆಯಲ್ಲಿ ಹಾಗೂ ವಿಸೃತವಾಗಿ ವಿವರಿಸುವ ಲೇಖನಗಳನ್ನು ಪ್ರಕಟಿಸುತ್ತಿದ್ದಾರೆ. ಇದರೊಂದಿಗೆ ಮಾನವ ಆಸಕ್ತಿ ಲೇಖನಗಳನ್ನು ಪ್ರಕಟಿಸುವಲ್ಲಿಯೂ ಆಸಕ್ತರಾಗಿದ್ದಾರೆ.

ಶಿಕ್ಷಣ : 2025ರಲ್ಲಿ ಬೆಂಗಳೂರು ಸಿಟಿ ಯುನಿವರ್ಸಿಟಿಯ ಅಡಿಯಲ್ಲಿರುವ ವಿಜಯ ಕಾಲೇಜು ಜಯನಗರದಿಂದ ಪತ್ರಿಕೋದ್ಯಮ ಹಾಗೂ ಕಮ್ಯೂನಿಕೇಟಿವ್‌ ಇಂಗ್ಲಿಷ್‌ ಪದವಿ ಪಡೆದಿದ್ದಾರೆ. ಅಂತರ ಕಾಲೇಜು ಕಾರ್ಯಕ್ರಮಗಳಲ್ಲಿಯೂ ಪತ್ರಿಕೋದ್ಯಮ ಸ್ಪರ್ಧೆಗಳಿಗೆ ಸಂಬಂಧಿಸಿದಂತೆ ಪ್ರಶಸ್ತಿಗಳನ್ನು ಗಳಿಸಿದ್ದಾರೆ.

ಹವ್ಯಾಸ : ಪ್ರವಾಸದಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಕೆ-ಪಾಪ್‌ ಸಂಗೀತ ಹಾಗೂ ಕೆ-ಸಿರೀಸ್‌ ಗಳು, ಕೆ-ಕಲ್ಚರ್‌ ಹಾಗೂ ಸೆಲೆಬ್ರಿಟಿಗಳನ್ನು ಕುರಿತು ತಿಳಿದುಕೊಳ್ಳವಲ್ಲಿ ವಿಶೇಷ ಆಸಕ್ತಿಯನ್ನು ಹೊಂದುವುದರ ಜೊತೆಗೆ ಚೈನಿಸ್ ಸಿರೀಸ್‌ ಗಳನ್ನು ವಿಕ್ಷೀಸುವಲ್ಲಿಯೂ ಆಸಕ್ತಿಯನ್ನು ಹೊಂದಿದ್ದಾರೆ.

ವ್ಯಾಪ್ತಿ ವಿಶೇಷತೆ : ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಕಳೆದ ಕೆಲ ತಿಂಗಳುಗಳಿಂದ ಕೆಲಸ ನಿರ್ವಹಿಸುತ್ತಿರುವ ಇವರು ಹಲವು ಅಂತಾರಾಷ್ಟ್ರೀಯ ವಿದ್ಯಮಾನಗಳ (Geopolitics) ಕುರಿತಂತೆ ಲೇಖನಗಳನ್ನು ಪ್ರಕಟಿಸಿದ್ದಾರೆ. ವಿಶೇಷವಾಗಿ ರಷ್ಯಾ ಅಧ್ಯಕ್ಷ ಪುಟಿನ್‌ ಭಾರತ ಭೇಟಿಯ ಕ್ಷಣ ಕ್ಷಣದ ಮಾಹಿತಿಯನ್ನು ಹಂಚಿಕೊಳ್ಳುವ ವಿಸ್ತೃತ ಲೇಖನ ಪ್ರಕಟಿಸಿದ್ದು, ಇದರಲ್ಲಿ ಭಾರತ-ರಷ್ಯಾ ನಡುವಿನ ರಾಜತಾಂತ್ರಿಕ, ರಕ್ಷಣಾ ವಲಯ ಸೇರಿದಂತೆ ದ್ವೀಪಕ್ಷೀಯ ಸಂಬಂಧಕ್ಕೆ ಸಾಕ್ಷಿಯಾದ ಹಲವು ಘಟನೆಗಳು ಹಾಗೂ ರಷ್ಯಾ ಅಧಕ್ಷ ವ್ಲಾಡಿಮಿರ್‌ ಪುಟಿನ್‌ ಭೇಟಿಯಿಂದ ಭಾರತಕ್ಕೆ ಸಿಕ್ಕ ಕೊಡುಗೆಗಳ ಕುರಿತು ವಿವರಿಸುವ ಮಾಹಿತಿಗಳನ್ನು ನೀಡಿದ್ದಾರೆ.… ಇನ್ನಷ್ಟು ಓದಿ